ಇದು ನಾನಾಗೇ ನಾನು ಮಾಡಿಕೊಂಡ ಬಂಧನ ಎನ್ನಲೋ ಅಥವಾ ಮನೆಯವರ ಒತ್ತಡಕ್ಕೆ ಮಣಿದು ಬಂಧಿಸಿಕೊಂಡದ್ದು ಎನ್ನಲೋ.. ಏನೇ ಆದರೂ ವಿವಾಹವೆಂಬ ಬಂಧನದಲ್ಲಿ ಸಿಲುಕಿಕೊಂಡದ್ದಂತೂ ಆಗಿದೆ.
ಎಲ್ಲರಿಗೂ ವಿವಾಹದ ನಂತರದ ಬದುಕು ಸುಲಭದ ಹಾದಿಯಾಗಿರುವುದಿಲ್ಲ. ಅವತ್ತು ನನ್ನ ಮುಂದೆ ಇದ್ದದ್ದು ಎರಡೇ ಆಯ್ಕೆಗಳು ಸಾವು ಇಲ್ಲವೇ ಹೋರಾಟದ ಬದುಕು. ಓದಿದ ನಾನೇ ಹೇಡಿಯಾದರೆ.. ಇಲ್ಲ, ಮುಂದಿನ ದಾರಿ ನಿಚ್ಚಳವಾಗಿತ್ತು. ಬಂಧನದಿಂದ ಹೊರ ಬಂದು ಓದಿದೆ. ಈಗ ಮನಃಶಾಸ್ತ್ರಜ್ಞೆಯಾಗಿದ್ದೇನೆ. ಎಲ್ಲರಿಗೂ ಮುಂದಿನ ಹಾದಿಗೆ ಬೆಳಕು ಬೀರಲು..
ಮುಂದಿನ ಹಾದಿಗೆ ಬೆಳಕು ಬೀರಲು ದೀಪ ತನ್ನನ್ನೇ ಸುಟ್ಟುಕೊಳ್ಳುವ ಕುರಿತು ನನಗೆ ಬೇಸರವಿಲ್ಲ.. ಬದಲಿಗೆ ಸಮರ್ಪಣೆಯ ಸಂತಸವಿದೆ.
~ವಿಭಾ ವಿಶ್ವನಾಥ್
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ